ಹಾಸನ | ಬೈಕ್ ಗೆ ಬಸ್ ಢಿಕ್ಕಿ: ದಂಪತಿ ಸ್ಥಳದಲ್ಲೇ ಮೃತ್ಯು
Update: 2025-09-24 23:45 IST
ಹಾಸನ: ಚನ್ನರಾಯಪಟ್ಟಣ ತಾಲೂಕಿನ ಕಲಸಿಂದ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಗವೀಗೌಡ (38) ಮತ್ತು ರೂಪ (35) ಎಂದು ಗುರುತಿಸಲಾಗಿದೆ. ಇವರು ಬೈಕ್ನಲ್ಲಿ ಚನ್ನರಾಯಪಟ್ಟಣದಿಂದ ಕಲಸಿಂದ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ, ಚನ್ನರಾಯಪಟ್ಟಣದ ದಿಕ್ಕಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ದುರಂತ ಸಂಭವಿಸಿದೆ.
ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.