×
Ad

ಹಾಸನ | ಸಿಡಿಲು ಬಡಿದು ಯುವಕ ಮೃತ್ಯು

Update: 2024-10-19 23:12 IST

 ದಿನೇಶ್ (21)

ಹಾಸನ: ಮಳೆಯಿಂದ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದುದ್ದ ಹೋಬಳಿಯ ಕುದುರುಗುಂಡಿ ಗ್ರಾಮದಲ್ಲಿ ನಡೆದಿದೆ.

ಹಾಸನದ ಕೆಎಂಎಫ್‌ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿನೇಶ್ (21) ಮೃತಪಟ್ಟ ಯುವಕ.

ಇಂದು(ಶನಿವಾರ) ಮಧ್ಯಾಹ್ನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದಿನೇಶ್, ಮಳೆ ಶುರುವಾದ್ದರಿಂದ ರಕ್ಷಣೆಗಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮರದ ಕೆಳಗೆ ನಿಂತಿದ್ದರು. ಈ ವೇಳೆ‌ ಹಠಾತ್ ಸಿಡಿಲು ಬಡಿದಿದ್ದು, ದಿನೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ  ಎಂದು ತಿಳಿದು ಬಂದಿದೆ.

ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News