×
Ad

ಹಾಸನ | ಕೆಎಸ್ಸಾರ್ಟಿಸಿ ಬಸ್- ಕಾರು ಢಿಕ್ಕಿ : ಇಬ್ಬರು ಮೃತ್ಯು

Update: 2024-06-30 18:53 IST

ಹಾಸನ : ಕೆಎಸ್ಸಾರ್ಟಿಸಿ ಬಸ್ ಹಾಗೂ ಆಲ್ಟೋ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಊಪಿನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಡಬ ಗ್ರಾಮದ ಮಂಜುನಾಥ್ (26) ಎಂದು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ.

ಚನ್ನರಾಯಪಟ್ಟಣದ‌ ಕಡೆಗೆ ಬರುತ್ತಿದ್ದ ಕಾರು, ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಇಬ್ಬರ ಮೃತದೇಹ ನುಜ್ಜುಗುಜ್ಜಾಗಿವೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News