×
Ad

ಹಾಸನ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Update: 2024-08-28 11:41 IST

ಹಾಸನ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೇಲೂರು ತಾಲ್ಲೂಕಿನ, ಜೆ.ಸುರಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಮಲ್ಲಿಕಾರ್ಜುನ (58) ಮೃತ ವ್ಯಕ್ತಿ. ಆ.13 ರಂದು ಬೈಕ್‌ ನಲ್ಲಿ ಜಮೀನಿಗೆ ಗೊಬ್ಬರ ತೆಗೆದುಕೊಂಡು ಹೋಗುತ್ತಿದ್ದ ಮಲ್ಲಿಕಾರ್ಜುನ ಅವರ ಮೇಲೆ ಏಕಾಏಕಿ ದಾಳಿ ಮಾಡಿದ್ದ ಕಾಡಾನೆ ಸೊಂಡಿಲಿನಿಂದ ಎಸೆದು, ತುಳಿದು ಗಾಯಗೊಳಿಸಿತ್ತು.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿ ಮನೆಗೆ ಕರೆತರಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News