×
Ad

ಪುನೀತ್ ಕೆರೆಹಳ್ಳಿಗೆ ಸಕಲೇಶಪುರ ಪ್ರವೇಶ ನಿರ್ಬಂಧಿಸಿದ ಪೊಲೀಸರು

Update: 2025-08-13 17:31 IST

ಸಕಲೇಶಪುರ : ಹಿಂದೂ ಹಿತರಕ್ಷಣಾ ವೇದಿಕೆ ಆಯೋಜಿಸಿದ್ದ ಪಂಜಿನ ಮೆರವಣಿಗೆಗೆ ಆಗಮಿಸಲು ಯೋಜಿಸಿದ್ದ ಪುನೀತ್ ಕೆರೆಹಳ್ಳಿಗೆ ಸಕಲೇಶಪುರ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.

ಹಾಸನದ ಶಾಂತಿ ಗ್ರಾಮದ ಬಳಿ ಪೊಲೀಸರು ಪುನೀತ್ ಕೆರೆಹಳ್ಳಿಯ ವಾಹನವನ್ನು ತಡೆದು ನೋಟೀಸ್‌ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಈ ಕ್ರಮ ಜಾರಿಗೆ ಬಂದಿದ್ದು, ಅಶಾಂತಿ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ಹೇರಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News