×
Ad

ಹಾಸನ | ಗಣೇಶ ಮೆರವಣಿಗೆ ವೇಳೆ ಭೀಕರ ರಸ್ತೆ ಅಪಘಾತ; ಕನಿಷ್ಠ 5 ಮಂದಿ ಮೃತಪಟ್ಟಿರುವ ಶಂಕೆ

ಸುಮಾರು 25ಕ್ಕೂ ಹೆಚ್ಚು ಜನರು ಗಂಭೀರ

Update: 2025-09-12 22:01 IST

ಹಾಸನ : ಹೊಳೆನರಸೀಪುರ ನಡುವಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಮೆರವಣಿಗೆ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್ ಲಾರಿಗೆ ಸಿಲುಕಿ ಸುಮಾರು 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೊಸಳೆ ಹೊಸಳ್ಳಿ ರಸ್ತೆಯಲ್ಲಿ ಗಣೇಶ ವಿಸರ್ಜನೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಕ್ಯಾಂಟರ್ ನುಗ್ಗಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಸುಮಾರು 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು ಮೃತರ ಸಂಖ್ಯೆ ಹೆಚ್ಚಾಗುವ ಸಂಭವವಿದೆ. ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Full View

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News