×
Ad

ಚುನಾವಣೆ ಸಂದರ್ಭದಲ್ಲಿ ʼಗೃಹಲಕ್ಷ್ಮಿʼ ಹಣ ಬಿಡುಗಡೆಯು ನೀತಿ ಸಂಹಿತೆ ಉಲ್ಲಂಘನೆ : ಬೊಮ್ಮಾಯಿ

Update: 2024-11-12 18:46 IST

 ಬಸವರಾಜ ಬೊಮ್ಮಾಯಿ

ಶಿಗ್ಗಾಂವಿ : ʼಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್‌ಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ದವಾಗಿದೆ. ಇದನ್ನು ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕುʼ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ʼಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರಕಾರ ಪ್ರತಿ ಬಾರಿಯೂ ಚುನಾವಣೆಗೆ ಮುನ್ನ ಸರಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ. ಹಾವೇರಿ ಜಿಲ್ಲಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ‌. ಇದನ್ನು ಕೂಡಲೆ ನಿಲ್ಲಿಸಬೇಕುʼ ಎಂದು ಆಗ್ರಹಿಸಿದ್ದಾರೆ‌.

ಚುನಾವಣೆಗೆ ಸರಕಾರದ ಹಣ ಬಳಕೆಯಾಗುತ್ತಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ, ಸಂವಿಧಾನದ ಬಹಳ ಬಗ್ಗೆ ಮಾತನಾಡುತ್ತಾರೆ‌. ಇಡೀ ಸರಕಾರವೇ ಸರಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ ಮಾಡುತ್ತಿದೆ. ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನಿರಂತರವಾಗಿ ನಡೆಯುತ್ತಿರುವ ಈ ಕ್ಷೇತ್ರದ ಅಭಿವೃದ್ಧಿಯನ್ನು ನೋಡಿ ಎಲ್ಲ ವರ್ಗದ ಜನರು ಈಗಾಗಲೇ ಏನು ತೀರ್ಮಾನ ಮಾಡಿದ್ದಿರಿ, ಅದನ್ನು ಯಾವುದೇ ಕಾರಣಕ್ಕೂ ಬದಲಾಯಿಸದೇ ಮತದಾನ ಮಾಡುವಂತೆ ಅವರು ಮನವಿ ಮಾಡಿದ್ದಾರೆ‌.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News