ಹುಬ್ಬಳ್ಳಿ: ರಸ್ತೆ ಅಪಘಾತ, ಮೂವರು ಮೃತ್ಯು
Update: 2025-05-30 10:59 IST
ಹುಬ್ಬಳ್ಳಿ: ನಿಂತಿದ್ದ ಲಾರಿಗೆ ಟವೇರಾ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ನಡೆದಿದೆ.
ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಮೃತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.