ಅಫಜಲಪುರ: ತಾಲೂಕಿನ ಗಡಿ ಗ್ರಾಮ ಬಡದಾಳದ ಶ್ರೀ ಚನ್ನಮಲ್ಲೇಶ್ವರ ಶ್ರೀಮಠದ ಆವರಣದಲ್ಲಿ ಬಡ ಜನರಿಗಾಗಿ ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.

ಸ್ಲಂ ಜನರ ಸಂಘಟನೆ–ಕರ್ನಾಟಕದ ಕಲಬುರಗಿ ಜಿಲ್ಲಾ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಹಾಗೂ ಶ್ರೀ ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆ, ಬಡದಾಳ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ರವಿಕಾಂತ್ ಎಸ್. ಕ್ಯಾತ್ನಳ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಡದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರತ್ನಶೀಲ ಚಾಲನೆ ನೀಡಿದರು.

ನೇತ್ರ ಅಧಿಕಾರಿಗಳಾದ ಸುರೇಶ್ ಬಿ. ಹಾಗೂ ಅನಿಸ್ ಸುಲ್ತಾನ ಅವರು ಸಾರ್ವಜನಿಕರ ಕಣ್ಣಿನ ತಪಾಸಣೆ ನಡೆಸಿದರು. ತಪಾಸಣೆಗೆ ಆಗಮಿಸಿದ್ದ ಸುಮಾರು 197 ಮಂದಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.

ಬಡ ಹಾಗೂ ಅಗತ್ಯವಿರುವ ಜನರಿಗೆ ಉಚಿತ ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಿಸುವ ಮೂಲಕ ಕಾರ್ಯಕ್ರಮವು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿತು.

ಈ ಸಂದರ್ಭದಲ್ಲಿ ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಮುಖಂಡರು, ಸಂಘಟನೆಯ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಶ್ರೀಮಠದ ಭಕ್ತಾದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor