Afzalpur | ಜಯಕರ್ನಾಟಕ ಜನಪರ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮುತ್ತು ಕುರಿಮನಿ ನೇಮಕ
ಅಫಜಲಪುರ: ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ರಾಜ್ಯ ಕಾರ್ಯಾಧ್ಯಕ್ಷ ಹೆಚ್. ರಾಮಚಂದ್ರಯ್ಯ ಅವರ ಉಪಸ್ಥಿತಿಯಲ್ಲಿ ಕಲಬುರಗಿಯಲ್ಲಿ ನಡೆದ ಸಂಘಟನೆ ಬಲವರ್ಧನೆ ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಅಫಜಲಪುರ ತಾಲೂಕು ಅಧ್ಯಕ್ಷರಾಗಿ ಮುತ್ತು ಕುರಿಮನಿ ಅವರನ್ನು ನೇಮಕ ಮಾಡಿ ನೇಮಕಾತಿ ಪತ್ರ ವಿತರಿಸಲಾಯಿತು.
ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸ್, "ಸಂಘಟನೆ ವ್ಯಕ್ತಿಗಿಂತ ದೊಡ್ಡದು. ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ, ಸಂಘಟನೆಯನ್ನು ಗ್ರಾಮ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಇನ್ನಷ್ಟು ಬಲಪಡಿಸಬೇಕು" ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಹಾಲಪ್ಪ ವರವಿ, ರಾಜ್ಯ ಸಮಿತಿ ಸಲಹೆಗಾರ ಉಮೇಶ್ ಬೀರಬಿಟ್ಟೆ, ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿ ನವೀನ್ ಬತಲಿ, ಜಿಲ್ಲಾ ಅಧ್ಯಕ್ಷ ಅರುಣ್ ನಾಮದಾರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.