ಆಳಂದ | ಜನಪರ, ರೈತಪರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಐ–ಕಿಸಾನ್ ಸಭಾ ಪ್ರತಿಭಟನೆ

Update: 2026-08-11 18:39 IST

ಆಳಂದ: ವಿವಿಧ ಜನಪರ ಹಾಗೂ ರೈತಪರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಹಾಗೂ ಅಖಿಲ ಭಾರತ ಕಿಸಾನ್ ಸಭಾ ತಾಲೂಕು ಘಟಕದ ಕಾರ್ಯಕರ್ತರು ಸಾವಳೇಶ್ವರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕಿಸಾನ್ ಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ತಾಲೂಕು ಅಧ್ಯಕ್ಷ ಧರ್ಮಣ್ಣ ಪೂಜಾರಿ ಹಾಗೂ ಸಿಪಿಐ ತಾಲೂಕು ಕಾರ್ಯದರ್ಶಿ ಆಷ್ಪಾಕ್ ಮುಲ್ಲಾ, ಗ್ರಾಮೀಣ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಗ್ರಾಮ ಪಂಚಾಯಿತಿ ಆಡಳಿತ ತುರ್ತಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ರೈತರು, ಕೂಲಿಕಾರರು ಹಾಗೂ ಬಡವರ ಮೂಲಭೂತ ಅಗತ್ಯಗಳನ್ನು ಈಡೇರಿಸುವಲ್ಲಿ ಸ್ಥಳೀಯ ಆಡಳಿತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ಮನವಿಯಲ್ಲಿ ಉಲ್ಲೇಖಿಸಿರುವ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಹಾದೇವ ಪೂಜಾರಿ ಮಂಟಗಿ, ಚಂದ್ರಕಾಂತ ಕಲಶೆಟ್ಟಿ, ಶ್ರೀಮಂತ ನಡಿಗೇರಿ ಸೇರಿದಂತೆ ಸಿಪಿಐ ಹಾಗೂ ಕಿಸಾನ್ ಸಭಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News