ನನ್ನ ಕುಟುಂಬ ಒಡೆಯುವುದಕ್ಕೆ ಬಿಜೆಪಿಯವರೇ ಕಾರಣ : ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ್

Update: 2024-04-16 11:28 GMT

ಕಲಬುರಗಿ‌ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸಹೋದರ ನೀತಿನ್ ಗುತ್ತೇದಾರ್ ಅವರನ್ನು ಎತ್ತಿ ಕಟ್ಟಿ ನನ್ನ ವಿರುದ್ದವೇ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಿಸಿ, ನನ್ನ ಕುಟುಂಬ ಒಡೆಯುವುದಕ್ಕೆ ಬಿಜೆಪಿಯವರೇ ಕಾರಣ ಎಂದು ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಹೇಳಿದರು.

ಮಂಗಳವಾರ ‌ತಮ್ಮ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ನನ್ನ ಸಹೋದರ 2023ರಲ್ಲಿ ನನ್ನ ವಿರುದ್ಧ ಚುನಾವಣಾ ಕಣಕ್ಕೆ ಇಳಿದಿದ್ದಾಗ ಬಿಜೆಪಿ ನಾಯಕರು ಒಂದೇ ಒಂದು ಸಲ ಬಂದು ಮಾತನಾಡಲಿಲ್ಲ ಎಂದು ಬಿಜೆಪಿ ನಾಯಕರ ಮೇಲೆ ಅಸಮಾಧಾನ ಹೊರಹಾಕಿದರು.

ತುಂಬಿದ ಸಭೆಯಲ್ಲಿ ಅವರ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆಯಾಗುವಂತೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವೆ ಎಂದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News