×
Ad

ಚಿಂಚೋಳಿ | ಕುಸಿದು ಬಿದ್ದು ಕಾರ್ಮಿಕ ಸಾವು

Update: 2024-11-28 17:15 IST

ಚಿಂಚೋಳಿ : ತಾಲೂಕಿನ ಚಿಟ್ಟಿನಾಡ್ ಸಿಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕರೋರ್ವರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಅಸ್ಸಾಂ ಮೂಲದ ಕೇಶವ್ (28) ಮೃತ ಕಾರ್ಮಿಕನಾಗಿದ್ದು, ಟಾಟಾ ಸೋಲಾರ ಏಜೇನ್ಸಿ ಅಡಿ ಚೆಟ್ಟಿನಾಡ್ ಸಿಮೆಂಟ್ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಚೆಟ್ಟಿನಾಡ್ ಸಿಮೆಂಟ್ ಕಾರ್ಖಾನೆಯಿಂದ ಆಂಬ್ಯುಲೆನ್ಸ್ ಮೂಲಕ ಪಟ್ಟಣದ ಚಂದಾಪೂರ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.

ಮೃತ ಕಾರ್ಮಿಕ ಕೇಶವ್ ತಲೆ ಸುತ್ತು ಬಿದ್ದು ಸಾವನಪ್ಪಿದ್ದಾನೆ. ಹೀಗಾಗಿ ಇದೊಂದು ಸಹಜ ಸಾವಾಗಿದೆ ಎಂದು ಚೆಟ್ಟಿನಾಡ್ ಸಿಮೆಂಟ್ ಕಾರ್ಖಾನೆ ಆಡಳಿತ ಮಂಡಳಿ ಮತ್ತು ಸರಕಾರಿ ಕಾರ್ಮಿಕ ಇಲಾಖೆಯ ಅಧಿಕಾರಿ ಶಿವರಾಜ ಪಾಟೀಲ್ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News