Chitapur | ಪಟ್ಟಣದಲ್ಲಿ ಕುಂಬಾರ ಸಮಾಜದ ನಾಮಫಲಕ ಅಳವಡಿಕೆಗೆ ಕುಂಬಾರರ ಮಹಾಸಭಾ ಮನವಿ
ಚಿತ್ತಾಪುರ : ಪಟ್ಟಣದ ಪುರಸಭೆ ವ್ಯಾಪ್ತಿ ಅಥವಾ ಸೂಕ್ತ ಸರ್ಕಾರಿ ಜಾಗದಲ್ಲಿ ಕುಂಬಾರ ಸಮಾಜದ ನಾಮಫಲಕ (ಬೋರ್ಡ್) ಅಳವಡಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ಕುಂಬಾರರ ಮಹಾಸಭಾ ಪದಾಧಿಕಾರಿಗಳು ತಹಶೀಲ್ದಾರ್ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ತಾಲೂಕು ಅಧ್ಯಕ್ಷ ವಿಶ್ವನಾಥ ಎಸ್. ಕುಂಬಾರ ಹಾಗೂ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಜಗದೇವ ಎಸ್. ಕುಂಬಾರ ಅವರ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಚಿತ್ತಾಪುರ ಪಟ್ಟಣದಲ್ಲಿ ಕುಂಬಾರ ಸಮಾಜದ ಜನರು ಗಣನೀಯ ಸಂಖ್ಯೆಯಲ್ಲಿ ವಾಸವಾಗಿದ್ದು, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ.
ಸಮಾಜದ ಗುರುತಿಸುವಿಕೆ ಹಾಗೂ ಸಾರ್ವಜನಿಕ ಅನುಕೂಲಕ್ಕಾಗಿ ಪಟ್ಟಣದ ವ್ಯಾಪ್ತಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ, ಪುರಸಭೆ ವ್ಯಾಪ್ತಿ ಅಥವಾ ಸರ್ಕಾರಿ ಜಾಗದಲ್ಲಿ ಕುಂಬಾರ ಸಮಾಜದ ಹೆಸರಿನ ನಾಮಫಲಕ ಅಳವಡಿಸಲು ಕಾನೂನುಬದ್ಧ ಅನುಮತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿ ಸಮಾಜದ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಹಾದೇವ ಕುಂಬಾರ, ಉಪಾಧ್ಯಕ್ಷರಾದ ಆನಂದ ಕುಂಬಾರ, ರಾಜಶೇಖರ್ ಕುಂಬಾರ ಮಲಕೂಡ, ಕಾರ್ಯದರ್ಶಿ ಕಾಶಿನಾಥ್ ಕುಂಬಾರ, ಸಹ ಕಾರ್ಯದರ್ಶಿ ಬಸವರಾಜ ಕುಂಬಾರ, ಸಮಾಜದ ಮುಖಂಡರಾದ ಶ್ರೀಮಂತ ಕುಂಬಾರ, ಮೋಗಲಪ್ಪ ಕುಂಬಾರ, ಸುಭಾಷ ಕುಂಬಾರ, ಸಿದ್ದು ಕುಂಬಾರ, ಮಹೇಶ್ ಕುಂಬಾರ, ಮಲ್ಲಿಕಾರ್ಜುನ ಬಿ ಕುಂಬಾರ, ಗುರುಪಾದಪ್ಪ ಕುಂಬಾರ, ಚಿತ್ರಶೇಖರ್ ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ತರುಣ್ ಕುಂಬಾರ, ಹಣಮಂತ ಕುಂಬಾರ, ವಿಶ್ವಾರಾಧ್ಯ ಕುಂಬಾರ, ರಾಜಶೇಖರ್ ಎನ್ ಕುಂಬಾರ, ದಶರಥ ಕುಂಬಾರ, ರೇವಣಸಿದ್ದಪ್ಪ ಕುಂಬಾರ ಸೇರಿದಂತೆ ಇತರರು ಇದ್ದರು.