×
Ad

ಚಿತ್ತಾಪುರ | ವೆಂಕಟೇಶ ನಗರದಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಪುರಸಭೆ ಮುಖ್ಯಾಧಿಕಾರಿಗೆ ಮನವಿ

Update: 2026-03-10 19:38 IST

ಚಿತ್ತಾಪುರ: ಪಟ್ಟಣದ ವೆಂಕಟೇಶ ನಗರದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ನಾಗರಿಕರು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ನಿವಾಸಿ ದೇವಪ್ಪ ನಂದೂರಕರ್ ಮಾತನಾಡಿ, ನೀರಿನ ಸಮಸ್ಯೆ ಕುರಿತು ಪುರಸಭೆ ವ್ಯವಸ್ಥಾಪಕರು ಹಾಗೂ ನೀರು ಬಿಡುವ ಸಿಬ್ಬಂದಿಗೆ ಹಲವು ಬಾರಿ ತಿಳಿಸಿದ್ದೇವೆ. ಎರಡು–ಮೂರು ಬಾರಿ ಲಿಖಿತ ಮನವಿ ಪತ್ರಗಳನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದಲ್ಲದೆ ವಾರ್ಡ್ ಪುರಸಭೆ ಸದಸ್ಯ ವಿನೋದ ಗುತ್ತೇದಾರ ಅವರಿಗೂ ಹಲವು ಬಾರಿ ಸಮಸ್ಯೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ತಿಳುವಳಿಕೆಯುಳ್ಳ ನಾಗರಿಕರಾಗಿರುವ ನಾವು ಸಮಸ್ಯೆ ಇಂದಲ್ಲ ನಾಳೆ ಪರಿಹಾರವಾಗಬಹುದು ಎಂದು ಭಾವಿಸಿ ಇದುವರೆಗೆ ಸಹನೆಯಿಂದ ಇದ್ದೇವೆ. ಆದರೆ ಈಗ ಎರಡು ದಿನಕ್ಕೊಮ್ಮೆ ಮನೆಗಳಿಗೆ ಟ್ಯಾಂಕರ್ ಮೂಲಕ ನೀರು ತರಿಸಿಕೊಂಡು ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ. ಈ ಸ್ಥಿತಿಯನ್ನು ನೀರು ಸರಬರಾಜು ಮಾಡುವವರು ಕೂಡ ಕಣ್ಣಾರೆ ನೋಡಿದ್ದಾರೆ ಎಂದು ಹೇಳಿದರು.

ಕೂಡಲೇ ನೀರಿನ ಸಮಸ್ಯೆ ಪರಿಹರಿಸದಿದ್ದರೆ ಕುಟುಂಬ ಸಮೇತ ಪುರಸಭೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಕೆ ನೀಡಿದರು.ವೆಂಕಟೇಶ ನಗರದಲ್ಲಿ ನೀರಿನ ಸಮಸ್ಯೆ: ಪುರಸಭೆ ಮುಖ್ಯಾಧಿಕಾರಿಗೆ ಮನವಿ

ಚಿತ್ತಾಪುರ: ಪಟ್ಟಣದ ವೆಂಕಟೇಶ ನಗರದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ನಾಗರಿಕರು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ನಿವಾಸಿ ದೇವಪ್ಪ ನಂದೂರಕರ್ ಮಾತನಾಡಿ, ನೀರಿನ ಸಮಸ್ಯೆ ಕುರಿತು ಪುರಸಭೆ ವ್ಯವಸ್ಥಾಪಕರು ಹಾಗೂ ನೀರು ಬಿಡುವ ಸಿಬ್ಬಂದಿಗೆ ಹಲವು ಬಾರಿ ತಿಳಿಸಿದ್ದೇವೆ. ಎರಡು–ಮೂರು ಬಾರಿ ಲಿಖಿತ ಮನವಿ ಪತ್ರಗಳನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದಲ್ಲದೆ ವಾರ್ಡ್ ಪುರಸಭೆ ಸದಸ್ಯ ವಿನೋದ ಗುತ್ತೇದಾರ ಅವರಿಗೂ ಹಲವು ಬಾರಿ ಸಮಸ್ಯೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ತಿಳುವಳಿಕೆಯುಳ್ಳ ನಾಗರಿಕರಾಗಿರುವ ನಾವು ಸಮಸ್ಯೆ ಇಂದಲ್ಲ ನಾಳೆ ಪರಿಹಾರವಾಗಬಹುದು ಎಂದು ಭಾವಿಸಿ ಇದುವರೆಗೆ ಸಹನೆಯಿಂದ ಇದ್ದೇವೆ. ಆದರೆ ಈಗ ಎರಡು ದಿನಕ್ಕೊಮ್ಮೆ ಮನೆಗಳಿಗೆ ಟ್ಯಾಂಕರ್ ಮೂಲಕ ನೀರು ತರಿಸಿಕೊಂಡು ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ. ಈ ಸ್ಥಿತಿಯನ್ನು ನೀರು ಸರಬರಾಜು ಮಾಡುವವರು ಕೂಡ ಕಣ್ಣಾರೆ ನೋಡಿದ್ದಾರೆ ಎಂದು ಹೇಳಿದರು.

ಕೂಡಲೇ ನೀರಿನ ಸಮಸ್ಯೆ ಪರಿಹರಿಸದಿದ್ದರೆ ಕುಟುಂಬ ಸಮೇತ ಪುರಸಭೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಿವಾಸಿಗಳಾದ ಮೋನಯ್ಯ ಪಂಚಾಳ, ಹಮೀದ್, ಸಾಬಣ್ಣ ಕಲಬುರಗಿ, ಹಣಮಂತ ಆಚಾರಿ, ಉದಯಕುಮಾರ ಇಂಗಳೆ, ರಾಘವೇಂದ್ರ ದ್ಯಾವರಳ್ಳಿ, ರೂಪಾ ಪೂಜಾರಿ, ಬೇಬಿ ಗುತ್ತೇದಾರ, ಪ್ರಭಾವತಿ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News