×
Ad

Kalaburagi | ಸ್ಲಂ ನಿವಾಸಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸಿಎಂಗೆ ಮನವಿ

ಭೂಹಕ್ಕು, ಹಕ್ಕುಪತ್ರ, ಮೂಲಸೌಕರ್ಯ, ಸ್ಲಂ ಘೋಷಣೆಗೆ ವೇಗ ನೀಡುವಂತೆ ಆಗ್ರಹ

Update: 2026-07-07 20:17 IST

ಕಲಬುರಗಿ: ರಾಜ್ಯದ ಕೊಳಚೆ ಪ್ರದೇಶ (ಸ್ಲಂ) ನಿವಾಸಿಗಳು ಹಲವು ವರ್ಷಗಳಿಂದ ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ, ಕಲಬುರಗಿ ಜಿಲ್ಲಾ ಸಮಿತಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿತು.

ನಗರದ ಅತಿಥಿ ಗೃಹದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಅಹವಾಲು ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ ಸಮಿತಿಯು, ಕಳೆದ ಎರಡು ದಶಕಗಳಿಂದ ಸ್ಲಂ ನಿವಾಸಿಗಳ ವಸತಿ, ಭೂಹಕ್ಕು, ಮೂಲಸೌಕರ್ಯ ಹಾಗೂ ಸರ್ಕಾರಿ ಯೋಜನೆಗಳ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯದೇ ಉಳಿದಿವೆ ಎಂದು ತಿಳಿಸಿತು.

ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ, ಸ್ಲಂ ನಿವಾಸಿಗಳ ಸಮಸ್ಯೆಗಳಿಗೆ ತ್ವರಿತ ಹಾಗೂ ಶಾಶ್ವತ ಪರಿಹಾರ ಕಲ್ಪಿಸಬೇಕು. ಬಾಕಿ ಉಳಿದಿರುವ ಕೊಳಚೆ ಪ್ರದೇಶಗಳನ್ನು ಶೀಘ್ರವೇ ಅಧಿಕೃತವಾಗಿ ಸ್ಲಂ ಎಂದು ಘೋಷಿಸಿ, ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದಲ್ಲದೆ, ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ, ಮೂಲಸೌಕರ್ಯ ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಸಮಿತಿಯ ರೇಣುಕಾ ಶರಡಗಿ, ಗೌರಮ್ಮ ಮಕಾ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News