×
Ad

ಕಲಬುರಗಿ | ಕಲಾವಿದ ರೆಹಮಾನ್ ಪಟೇಲ್‌ಗೆ ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ

Update: 2025-05-15 18:58 IST

ಕಲಬುರ ಗಿ: ಕಲಾವಿದ ರೆಹಮಾನ್ ಪಟೇಲ್ ಅವರನ್ನು 2022–23ನೇ ಸಾಲಿನ 52ನೇ ವಾರ್ಷಿಕ ಕರ್ನಾಟಕ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾಂಪ್ರದಾಯಿಕ ಲಘುಚಿತ್ರಕಲೆಯ ಕೃತಿ “ಮಧ್ಯಮದಿ ರಾಗ” ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಪ್ರಶಸ್ತಿಯಲ್ಲಿ 25,000 ರೂ. ನಗದು ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುತ್ತದೆ.

ಪ್ರಶಸ್ತಿ ಪಡೆದ ಚಿತ್ರಕಲಾ ಪ್ರದರ್ಶನವು ಮೇ 23 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವಲ್ರ್ಡ್ ಕಲ್ಚರ್‌ ನಲ್ಲಿ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ವಿಜೇತರಿಗೆ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬೀ. ನೀಲಮ್ಮರವರು ಪತ್ರದಲ್ಲಿ ತಿಳಿಸಿದ್ದಾರೆ.

ರೆಹಮಾನ್ ಪಟೇಲ್ ಅವರು ಕಳೆದ ಎರಡು ದಶಕಗಳಿಂದ ಸುರಪುರ ಲಘುಚಿತ್ರಕಲೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಲಾರೂಪವು 1773 ರಿಂದ 1858ರವರೆಗೆ ಸುರಪುರ ನಾಯಕರ ಆಳ್ವಿಕೆಯಲ್ಲಿ ಅರಳಿದಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News