×
Ad

ಕಲಬುರಗಿ | ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ : ಸವಾರ ಮೃತ್ಯು

Update: 2026-01-08 19:13 IST

ಬಸವರಾಜ ಹೂಗಾರ್

ಕಲಬುರಗಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಡಿ ಗ್ರೂಪ್ ನೌಕರರೊಬ್ಬರು ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ನಡೆದಿದೆ.

ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ, ನೆಲೋಗಿ ಗ್ರಾಮದ ನಿವಾಸಿ ಬಸವರಾಜ ಹೂಗಾರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಝಾಕೀರ್ ಕೈಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕೆತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತ ಬಸವರಾಜ್ ಹೂಗಾ‌ರ್ ಅವರು ತಮ್ಮ ಕೆಲಸ ಮುಗಿಸಿ ಪ್ರತಿನಿತ್ಯದಂತೆ ಜೇವರ್ಗಿ ಪಟ್ಟಣದಿಂದ ಸ್ವಗ್ರಾಮ ನೆಲೋಗಿಗೆ ಹೊರಟಿದ್ದರು. ರಸ್ತೆ ಮಧ್ಯೆ ನಿಲ್ಲಿಸಿದ ಲಾರಿಗೆ ಢಿಕ್ಕಿಯಾಗಿ ಸ್ಥಳದಲ್ಲೇ ಗಂಭೀರ ಗಾಯಗೊಂಡಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳದಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News