×
Ad

ಕಲಬುರಗಿ| ನಿಂತ ಲಾರಿಗೆ ಬೈಕ್ ಢಿಕ್ಕಿ: ಸ್ಥಳದಲ್ಲೇ ಬೈಕ್‌ ಸವಾರ ಸಾವು

Update: 2023-12-15 23:21 IST

ಕಲಬುರಗಿ: ಚಿತ್ತಾಪುರ ತಾಲೂಕಿನ ಮುಡಬೂಳ ಗೇಟ್ ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಹಿಂದೆಯಿಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್‌ ಸವಾರ ಮೃತ ಪಟ್ಟಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ದಂಡೋತಿ ಗ್ರಾಮದ ನಿವಾಸಿ ಪ್ರಕಾಶ್ (28) ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಚಿತ್ತಾಪುರ ಪೊಲೀಸ್ ಠಾಣೆ ಪಿಎಸ್ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿಗಳಾದ ಹುಸೇನ್ ಪಾಶಾ, ಶಿವಯ್ಯ ಸ್ವಾಮಿ, ಮುಕ್ತುಂ ಪಟೇಲ್, ಮಂಜು ಅವರು ಭೇಟಿ ನೀಡಿ ಪರೀಸಿಲನೆ ನಡೆಸಿದ್ದಾರೆ.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News