×
Ad

ಕಲಬುರಗಿ | ಎ.30 ರಂದು ಸಾಂಸ್ಕೃತಿಕ ನಾಯಕ ಬಸವ ಜಯಂತಿ ಆಚರಣೆ

Update: 2025-04-25 21:25 IST

ಕಲಬುರಗಿ : ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಎ.30 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆ ಹತ್ತಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್‌ ಸಿಂಗ್, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ.ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಝ್‌ ಫಾತೀಮಾ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್‌ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ್‌ ಲೋಕಸಭಾ ಸದಸ್ಯ ಸಾಗರ್‌ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಉಮೇಶ ಜಾಧವ್‌, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲಾಪುರೆ, ಶಶೀಲ್‌ ಜಿ.ನಮೋಶಿ, ಡಾ.ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ.ತಳವಾರ ಸಾಬಣ್ಣ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸೈಯದ್ ಮಹಮ್ಮದ್ ಅಲಿ ಅಲ್ ಹುಸೇನಿ, ಮಹಾನಗರಪಾಲಿಕೆ ಮಹಾಪೌರ ಯಲ್ಲಪ್ಪ ನಾಯ್ಕೋಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು ಹಾಗೂ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಧಾರವಾಡದ ನಿವೃತ್ತ ಉಪನ್ಯಾಸಕ ಡಾ. ದುರ್ಗಾದಾಸ್ ಅವರು ವಿಶೇಷ ಉಪನ್ಯಾಸ ನೀಡುವರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News