ಕಲಬುರಗಿ: ನಗರದ ಮಿಸ್ಬಾ ನಗರದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಭಾರತ್ ಎಲೆಕ್ಟ್ರಿಕಲ್ಸ್ ಸೇಲ್ಸ್ & ಸರ್ವಿಸಸ್ ಸೇರಿದಂತೆ ಒಟ್ಟು ಐದು ಅಂಗಡಿಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಘಟನೆ ಕುರಿತು ಮಾಹಿತಿ ತಿಳಿದ ಸಮಾಜ ಸೇವಕ ಡಾ. ಫಾರೂಕ್ ಮಣೂರ ಅವರು ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ಅವಘಡದಿಂದ ಹಾನಿಗೊಳಗಾದ ಅಂಗಡಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂತ್ರಸ್ತ ಅಂಗಡಿ ಮಾಲೀಕರಿಗೆ ಧನಸಹಾಯ ನೀಡುವುದರ ಜೊತೆಗೆ, ಸಂಕಷ್ಟದ ಸಂದರ್ಭದಲ್ಲಿ ಧೈರ್ಯ ತುಂಬಿ, ತಮ್ಮಿಂದಾದ ನೆರವು ನೀಡಿದರು.

ಈ ವೇಳೆ ಮಾತನಾಡಿದ ಡಾ. ಫಾರೂಕ್ ಮಣೂರ ಅವರು, “ನನ್ನ ಕೈಲಾದಷ್ಟು ಸಹಾಯವನ್ನು ಮಾಡಿದ್ದೇನೆ. ಆದರೆ ಇಂತಹ ಕಷ್ಟದ ಸಂದರ್ಭದಲ್ಲಿ ಸಂತ್ರಸ್ತರಿಗೆ ಇನ್ನಷ್ಟು ನೆರವಿನ ಅಗತ್ಯವಿದೆ. ರಾಜಕೀಯ ಪ್ರಭಾವಿ ವ್ಯಕ್ತಿಗಳು, ಸಮಾಜ ಸೇವಕರು, ಸಾಮಾಜಿಕ ಕಳಕಳಿ ಹೊಂದಿರುವವರು ಹಾಗೂ ದಾನಿಗಳು ಮುಂದೆ ಬಂದು ಸಂತ್ರಸ್ತರಿಗೆ ಸಹಾಯ ಮಾಡಬೇಕು” ಎಂದು ಮನವಿ ಮಾಡಿದರು.

ಬೆಂಕಿ ಅವಘಡದಿಂದ ಜೀವನೋಪಾಯವನ್ನೇ ಕಳೆದುಕೊಂಡಿರುವ ಅಂಗಡಿ ಮಾಲೀಕರಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ ನೆರವಾಗಬೇಕು. ಸಂತ್ರಸ್ತ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸುವುದು ಮಾನವೀಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಅಂಗಡಿಗಳ ಮಾಲೀಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor