×
Ad

ಕಲಬುರಗಿ | ಶರಣಬಸವಪ್ಪ ಅಪ್ಪಾಜಿರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ಡಾ.ಜಾಧವ್

Update: 2025-07-30 22:00 IST

ಕಲಬುರಗಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನ ಮಠದ ಎಂಟನೇ ಪೀಠಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪ ಅವರನ್ನು ಮಾಜಿ ಸಂಸದರಾದ ಡಾ.ಉಮೇಶ್ ಜಾಧವ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನಗರದ ಖಾಸಗಿ ಆಸ್ಪತ್ರೆಗೆ ಜು.29ರಂದು ಭೇಟಿ ಮಾಡಿ ಪೂಜ್ಯರು ಶೀಘ್ರದಲ್ಲೇ ಚೇತರಿಸಿಕೊಂಡು ಸಮಸ್ತಭಕ್ತ ಕುಲಕೋಟಿಗೆ ಅಪ್ಪಾಜಿಯವರ ಕೃಪಾಶೀರ್ವಾದ ಮತ್ತು ಮಾರ್ಗದರ್ಶನ ಸಿಗುವಂತಾಗಲು ಶ್ರೀ ಶರಣಬಸವೇಶ್ವರರು ಅವರಿಗೆ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುವುದಾಗಿ ಡಾ. ಜಾಧವ್ ಈ ಸಂದರ್ಭದಲ್ಲಿ ಹೇಳಿದರು.

ಈ ಸಂದರ್ಭದಲ್ಲಿ ಅಪ್ಪಾಜಿಯವರ ಕುಟುಂಬದವರು ಉಪಸ್ಥಿತರಿದ್ದರು. ಬಿಜೆಪಿಯ ನಾಯಕರಾದ ರವಿ ರಾಜ್ ಕೊರವಿ, ಶಿವಕಾಂತ್ ಮಹಾಜನ್ ಅಶೋಕ್ ಚೌಹಾನ್ ವಿನೋದ್ ಚೌಹಾನ್ ಹಾಗೂ ರಾಘವೇಂದ್ರ ಕುಲಕರ್ಣಿ,ರೋಷನ್ ರಾಥೋಡ್, ಮಾಜಿ ಸಂಸದರ ಜೊತೆಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News