×
Ad

ಕಲಬುರಗಿ | ರಾಷ್ಟ್ರೀಯ ಬಂಜಾರಾ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಾ.ಉಮೇಶ್ ಜಾಧವ್ ಆಯ್ಕೆ

Update: 2025-05-25 19:32 IST

ಕಲಬುರಗಿ : ಅಖಿಲ ಭಾರತ ಬಂಜಾರಾ ಸೇವಾ ಸಂಘದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಹೈದರಾಬಾದ್ ನ ಖೈತಾಬಾದ್ ವಿದ್ಯುತ್ ಗಿರಿಜನ ಭವನದಲ್ಲಿ ಮೇ 25ರ ಭಾನುವಾರ ನಡೆದ ಅಖಿಲ ಭಾರತ ಬಂಜಾರಾ ಸೇವಾ ಸಂಘದ ಸೇವಾ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚುನಾವಣೆ ನಡೆಯಿತು.

ಈ ಹಿಂದಿನ ಅಧ್ಯಕ್ಷರಾದ ಶಂಕರ್ ಪವಾರ್ ಅವರ ಅವಧಿ ಪೂರ್ಣಗೊಂಡು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಕಾರ್ಯಕಾರಿ ಸಭೆ ನಡೆದಾಗ ಡಾ.ಜಾಧವ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ನೂತನ ಅಧ್ಯಕ್ಷರ ಚುನಾವಣೆಯ ಸಂಚಾಲಕರಾಗಿ ಡಾ.ರಮೇಶ್ ಆರ್ಯ ಕಾರ್ಯನಿರ್ವಹಿಸಿದ್ದರು.

ಡಾ.ಜಾಧವ್ ಅವರಿಗೆ ನಿರ್ಗಮಿತ ಅಧ್ಯಕ್ಷರಾದ ಶಂಕರ್ ಪವಾರ್ ಶುಭಾಶಯ ಕೋರಿ, ರಾಷ್ಟ್ರಮಟ್ಟದಲ್ಲಿ ಬಂಜಾರಾ ಜನಾಂಗಕ್ಕೆ ಉತ್ತಮ ನಾಯಕತ್ವವನ್ನು ನೀಡಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿ ಎಂದು ಹಾರೈಸಿದರು.

ಕಾರ್ಯಕಾರಿಣಿ ಸಭೆಯಲ್ಲಿ ನಿರ್ಗಮಿತ ಅಧ್ಯಕ್ಷರಾದ ಶಂಕರ್ ಪವಾರ್, ಮಹಾರಾಷ್ಟ್ರದ ಮಾಜಿ ವಿಧಾನ ಪರಿಷತ್ ಸದಸ್ಯರಾದ ನೀಲಯ್ಯ ನಾಯಕ್ ರಾಮುಲು ನಾಯಕ್, ಆಂಧ್ರ ಪ್ರದೇಶದ ಮಾಜಿ ಡಿಐಜಿ ಕೆ ಜಗನ್ನಾಥ್, ಮಾಜಿ ಸಂಸದರಾದ ಪ್ರೊ.ಸೀತಾರಾಮ ನಾಯಕ್, ಅಖಿಲ ಭಾರತ ಬಂಜಾರಾ ಸೇವಾ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಸದಸ್ಯರಾದ ಮಾಜಿ ಮಂತ್ರಿಗಳಾದ ರೇವು ನಾಯಕ್ ಬೆಳಮಗಿ, ಮಾಜಿ ಶಾಸಕರಾದ ಪಿ ರಾಜೀವ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಜಲಜಾ ನಾಯಕ್, ಪ್ರಕಾಶ್ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News