ಕಲಬುರಗಿ: ಸರ್ಕಾರಿ ನೌಕರರ ಸಂಘದಿಂದ ಡಾ.ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ
Update: 2025-12-06 12:48 IST
ಕಲಬುರಗಿ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ಬಳುಂಡಗಿ, ಜಿಲ್ಲಾ ಖಜಾಂಚಿ ಶ್ರೀಮಂತ ಪಟ್ಟೇದಾರ, ರಾಜ್ಯ ಪರಿಷತ್ ಸದಸ್ಯರಾದ ಧರ್ಮರಾಯ ಜವಳಿ, ಕಾರ್ಯಾಧ್ಯಕ್ಷರಾದ ಚಂದ್ರಕಾಂತ ಏರಿ, ಹಿರಿಯ ಉಪಾಧ್ಯಕ್ಷರಾದ ಎಂ. ಬಿ ಪಾಟೀಲ, ಸುರೇಶ ವಗ್ಗಿ, ಪ್ರಮುಖರಾದ ಕೃಷ್ಣಮಾಚಾರಿ, ವೀರಭದ್ರಯ್ಯ ಸ್ವಾಮಿ, ಸುನೀಲಕುಮಾರ ಚಾಂದೆ, ವೇದರಾಜ ವೇಸ್ಲಿ, ಸವಿತಾ ನಾಸಿ, ಪರಮೇಶ್ವರ ದೇಸಾಯಿ, ದೇವೇಂದ್ರಪ್ಪ ಗಣಮುಖಿ ಸೇರಿದಂತೆ ಇತರರು ಉಪಸ್ಥಿತರಿದ್ದರು.