×
Ad

Kalaburagi | ಕರ್ತವ್ಯದ ವೇಳೆ ಹೃದಯಾಘಾತ: KSRTC ನಿರ್ವಾಹಕ ಮೃತ್ಯು

Update: 2026-06-08 12:25 IST

ಮಲ್ಲಯ್ಯ ಸ್ವಾಮಿ

ಜೇವರ್ಗಿ : ಕಲಬುರಗಿ ಡಿಪೋ-2ರ ಕಲಬುರಗಿ–ಹರವಾಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಜೇವರ್ಗಿಯಿಂದ ಹರವಾಳ ಕಡೆಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಸಮೀಪ ಮಲ್ಲಯ್ಯ ಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್ ನಿಲ್ಲಿಸಿ ಅವರನ್ನು ಜೇವರ್ಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಪರೀಕ್ಷಿಸಿದ ವೇಳೆ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಮಲ್ಲಯ್ಯ ಸ್ವಾಮಿ ಅವರು ಜೇವರ್ಗಿ ತಾಲೂಕಿನ ರಾಜವಾಳ ಗ್ರಾಮದ ನಿವಾಸಿಯಾಗಿದ್ದರು.  ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜೇವರ್ಗಿ ಡಿಪೋ-2ರ ವ್ಯವಸ್ಥಾಪಕ ಕೃಷ್ಣ ಹಾಗೂ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಲ್ಲಯ್ಯ ಸ್ವಾಮಿ ಅವರ ನಿಧನಕ್ಕೆ ಕೆಎಸ್ಆರ್‌ಟಿಸಿ ಸಿಬ್ಬಂದಿ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಸಂತಾಪ ಸೂಚಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News