×
Ad

ಕಲಬುರಗಿ | ಕಸಾಪದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆ

Update: 2025-06-04 20:29 IST

ಕಲಬುರಗಿ : ಶಿಕ್ಷಣ ಮತ್ತು ಸರ್ವ ಜನರ ಅಭಿವೃದ್ಧಿಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ್‌ ತೇಗಲತಿಪ್ಪಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಸಲಾದ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಮಾತನಾಡಿದ ಅವರು, ಕನ್ನಡಿಗರ ಒಗ್ಗೂಡಿಕೆಗಾಗಿ ಪರಿಷತ್ತು ಹಗಲಿರುಳು ಶ್ರಮಿಸುತ್ತಿದೆ. ಪರಿಷತ್ತಿನ ಮೂಲ ಆಶಯವನ್ನು ಈಡೇರಿಸಲು ಜಿಲ್ಲಾ ಕಸಾಪ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದ ಅವರು ಹೇಳಿದರು.

ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ರಮೇಶ ಡಿ.ಬಡಿಗೇರ, ರಾಜೇಂದ್ರ ಮಾಡಬೂಳ, ಪ್ರಭವ ಪಟ್ಟಣಕರ್, ಸಂತೋಷ ಕುಡಳ್ಳಿ, ಶಿವಾನಂದ ಮಠಪತಿ, ರೇವಣಸಿದ್ದಪ್ಪ ಜೀವಣಗಿ, ನರಸಿಂಗರಾವ ಹೇಮನೂರ, ಚಂದ್ರಕಾಂತ ಸೂರನ್, ಎಂ.ಎನ್. ಸುಗಂಧಿ, ಗಣೇಶ ಚಿನ್ನಾಕಾರ, ಧರ್ಮರಾಜ ಜವಳಿ, ಕಲ್ಯಾಣಕುಮಾರ ಶೀಲವಂತ, ಶಕುಂತಲಾ ಪಾಟೀಲ, ಡಾ.ರೆಹಮಾನ ಪಟೇಲ್, ದಿನೇಶ ಮದಕರಿ, ರವಿಕುಮಾರ ಶಹಾಪುರಕರ, ಸೈಯ್ಯದ್ ನಝಿರುದ್ದೀನ್ ಮುತ್ತವಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News