ಕಲಬುರಗಿ: ಲಾರಿ- ಬೈಕ್ ಢಿಕ್ಕಿ; ಸವಾರ ಮೃತ್ಯು

Update: 2024-04-27 09:18 GMT

ಕಲಬುರಗಿ: ಲಾರಿ ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಳಂದ ತಾಲೂಕಿನ ಲಾಡ್ ಚಿಂಚೋಳಿ ಬಳಿ ಡೋಗಿ ಬಾನ್ ಘಾಟ್ ನಲ್ಲಿ ನಡೆದಿದೆ.

ಮೃತ ಸವಾರನನ್ನು ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ‌ ಅರ್ಜುನ್‌ ತಂದೆ ಭೀಮಾಶಂಕರ್ ಎಂದು ಗುರುತಿಸಲಾಗಿದೆ.  ಮಹಾರಾಷ್ಟ್ರದ ಪುಣೆಯಿಂದ ಯಾದಗಿರಿಗೆ ಬರುತ್ತಿದ್ದ ಭೀಮಶಂಕರ ಹಾಗೂ ಆತನ ಪತ್ನಿ ಸಂಚರಿಸುತ್ತಿದ್ದ ಬೈಕ್ ಗೆ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ 

ಭೀಮಶಂಕರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪತ್ನಿ  ಸೋನಾಲಿ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕಲಬುರ್ಗಿ ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 

ಅಪಘಾತ ಸಂಭವಿಸಿದ ಕೂಡಲೇ   ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು, ನರೋಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News