×
Ad

ಕಲಬುರಗಿ | ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ

Update: 2025-10-04 19:11 IST

ಶ್ರೀಮಂತರಾಯ 

ಕಲಬುರಗಿ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ನಡೆದಿದೆ.

ಶ್ರೀನಿವಾಸ ಸರಡಗಿಯ ನಿವಾಸಿ ಶ್ರೀಮಂತರಾಯ (32) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.

ಹಳೆಯ ವೈಷಮ್ಯದಿಂದಾಗಿ ಮದ್ಯಪಾನ ಮಾಡಿಸಿ ಪಾರ್ಟಿ ಮಾಡುತ್ತಿರುವಾಗ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಎಸಿಪಿ, ಪಿ.ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದು, ಕೊಲೆಯಾದ ವ್ಯಕ್ತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News