ಕಲಬುರಗಿ: ಜೆಡಿಎಸ್ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ
ಕಲಬುರಗಿ: ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ಘಟಕದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಯಿತು.
ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ ಬೀರಬಿಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಯುವ ಅಧ್ಯಕ್ಷ ಪ್ರವೀಣ್ ಜಾಧವ್ ನೇತೃತ್ವದಲ್ಲಿ ವಿವಿಧ ಹುದ್ದೆಗಳಿಗೆ ಯುವ ಮುಖಂಡರನ್ನು ನೇಮಕ ಮಾಡಲಾಯಿತು.
ಜಿಲ್ಲಾ ಯುವ ಉಪಾಧ್ಯಕ್ಷರಾಗಿ ಸಚಿನ್ ಭವಾನಿಕಾರ್, ಯುವ ಘಟಕದ ಕಾರ್ಯದರ್ಶಿಯಾಗಿ ರಾಘವೇಂದ್ರ ರಘು ಹೆಬ್ಬಾಳ, ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ(ಉತ್ತರ) ಚಂದ್ರಶೇಖರ ಕತ್ತರಕಿ, ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿ (ದಕ್ಷಿಣ)ಯಾಗಿ ಸಂತೋಷಕುಮಾರ್ ಸುಲ್ಪಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಉಪಾಧ್ಯಕ್ಷರಾಗಿ ಸಚಿನ್ ವಿಜಯ್ ಕುಮಾರ್ ಅವರನ್ನು ನೇಮಕ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಿರಿಯ ಮುಖಂಡರಾದ ಮಹಾಂತಪ್ಪ ಮದರಿ, ಹಣಮಯ್ಯ ಗುತ್ತೇದಾರ್, ಹಾಗೂ ನಾಗರಾಜ್ ಹೆಬ್ಬಾಳ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಯುವ ಅಧ್ಯಕ್ಷ ಪ್ರವೀಣ್ ಜಾಧವ್, ಪಕ್ಷದ ಸಂಘಟನೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಯುವಕರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಪಕ್ಷದ ತತ್ವ, ಸಿದ್ಧಾಂತಗಳು ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಯುವ ನಾಯಕರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಹೇಳಿದರು.