ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್
Update: 2025-10-28 20:31 IST
ಕಲಬುರಗಿ: ಶಿಕ್ಷಣ ಹಾಗೂ ಕೌಶಲ್ಯಾವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಮಂಗಳವಾರ ಸೇಡಂ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮತಕ್ಷೇತ್ರದ ವಿವಿಧ ಗ್ರಾಮದಿಂದ ಆಗಮಿಸಿದ ಜನರ ಸಮಸ್ಯೆ ಆಲಿಸಿ ಸಾರ್ವಜನಿಕರ ಆಹವಾಲು ಸ್ವೀಕರಿಸಿದರು.
ಬೆಳೆ ಪರಿಹಾರ, ರಸ್ತೆ ನಿರ್ಮಾಣ ಹಾಗೂ ಶಾಲಾ ಕಟ್ಟಡ ಸೇರಿದಂತೆ ವಿದ್ಯುತ್ ಸಂಪರ್ಕದ ಬಗ್ಗೆ ಬೇಡಿಕೆಗಳ ಬಗ್ಗೆ ಬಂದ ಮನವಿಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸೇರಿದಂತೆ ಹಲವರು ಇದ್ದರು.