×
Ad

Kalaburagi | ಪಿಯುಸಿ ವಿದ್ಯಾರ್ಥಿ ಜೀವನ ಯಶಸ್ಸಿನ ಭದ್ರ ಬುನಾದಿ: ಶಶೀಲ್ ನಮೋಶಿ

Update: 2026-05-25 17:00 IST

ಕಲಬುರಗಿ: 2026-27ನೇ ಶೈಕ್ಷಣಿಕ ಸಾಲಿನ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಅಂಗವಾಗಿ ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಹಾಗೂ ಆದರ್ಶನಗರ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನೇಕ ಶೈಕ್ಷಣಿಕ ಸಮಸ್ಯೆಗಳು ಹಾಗೂ ಇಲಾಖೆಯ ಗೊಂದಲಕಾರಿ ಆದೇಶಗಳ ನಡುವೆಯೂ ಈ ಬಾರಿಯ ಪಿಯುಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿದ ಉಪನ್ಯಾಸಕರು ನಿಜಕ್ಕೂ ಅಭಿನಂದನೆಗೆ ಅರ್ಹರು ಎಂದು ಹೇಳಿದರು.

“ಉಪನ್ಯಾಸಕರ ನಿರಂತರ ಪರಿಶ್ರಮ, ಬೋಧನಾ ಕೌಶಲ್ಯ ಹಾಗೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ನೀಡಿದ ಮಾರ್ಗದರ್ಶನದಿಂದ ಉತ್ತಮ ಫಲಿತಾಂಶ ಸಾಧ್ಯವಾಗಿದೆ. ರಾಜ್ಯದಲ್ಲಿ ಸರ್ಕಾರಿ ಕಾಲೇಜುಗಳ ಸಾಧನೆ ಮತ್ತು ವಿದ್ಯಾರ್ಥಿಗಳ ಉತ್ತೀರ್ಣತೆಯ ಪ್ರಮಾಣದಲ್ಲಿ ಕಂಡುಬಂದ ಏರಿಕೆ ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಪನ್ಯಾಸಕರ ಕೊರತೆಯಿದ್ದರೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದನ್ನು ಉಲ್ಲೇಖಿಸಿದ ಅವರು, “ಕಲಾ ವಿಭಾಗದಲ್ಲಿ ರಾಜ್ಯ ಪ್ರಥಮ ಸ್ಥಾನ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ರಾಜ್ಯದ ಟಾಪ್-10 ರ‍್ಯಾಂಕ್ ಪಟ್ಟಿಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಥಾನ ಪಡೆದಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯ. ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಜಾಣ್ಮೆಯನ್ನು ಈ ಬಾರಿಯ ಫಲಿತಾಂಶದ ಮೂಲಕ ಸ್ಪಷ್ಟವಾಗಿ ತೋರಿಸಿದ್ದಾರೆ ಎಂದು ಹೇಳಿದರು.

ನಂತರ ವಿದ್ಯಾರ್ಥಿಗಳಿಗೆ ಪುಷ್ಪ ವಿತರಿಸುವ ಮೂಲಕ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಬಾಲಿಕೆಯರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ದೇವನಗೌಡ ಪಾಟೀಲ್, ಆದರ್ಶನಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಜು ಗಂಗಾಧರ್, ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ. ಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ನರಸಪ್ಪ ರಂಗೋಲಿ ಸೇರಿದಂತೆ ಎರಡೂ ಕಾಲೇಜುಗಳ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News