×
Ad

ಕಲಬುರಗಿ | ಯುವಜನೋತ್ಸವದಲ್ಲಿ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯಕ್ಕೆ ಪ್ರಶಸ್ತಿ

Update: 2025-10-31 16:52 IST

ಕಲಬುರಗಿ : ಜಿಲ್ಲಾ ಯುವಜನೋತ್ಸವದ ವಿವಿಧ ಸ್ಫರ್ಧೆಗಳಲ್ಲಿ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯಕ್ಕೆ ಹಲವಾರು ಪ್ರಶಸ್ತಿಗಳು ಲಭಿಸಿವೆ.

ಸರಕಾರಿ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಲಕ್ಷ್ಮೀ ಪಾಟೀಲ ಮತ್ತು ತಂಡ ಪ್ರಥಮ ಸ್ಥಾನ, ಘೋಷಣೆ ಸ್ಫರ್ಧೆಯಲ್ಲಿ ರಸೀಕಾ ಪ್ರಥಮ ಸ್ಥಾನ, ಕಥೆ ಬರವಣಿಗೆ ಸ್ಪರ್ಧೆಯಲ್ಲಿ ಮಲ್ಲಿಕಾರ್ಜುನ ಪ್ರಥಮ ಸ್ಥಾನ, ಜಾನಪದ ಗೀತೆ ಸ್ಫರ್ಧೆಯಲ್ಲಿ ಪ್ರತೀಕ್ಷಾ ಮತ್ತು ತಂಡ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ದಾಕ್ಷಾಯಿಣಿ ಎಸ್.ಅಪ್ಪ, ಶರಣಬಸವೇಶ್ವರ ಸಂಸ್ಥೆಯ 9ನೇ ಪೀಠಾಧಿಪತಿ ಚಿ.ದೊಡ್ಡಪ್ಪ ಅಪ್ಪ ಮತ್ತು ಕಾರ್ಯದರ್ಶಿ ಬಸವರಾಜ ದೇಶಮುಖ ಶ್ಲಾಘಿಸಿ ಆಶೀರ್ವದಿಸಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಶರಥ ಮೇತ್ರೆ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News