ಕಲಬುರಗಿ | ಯುವಜನೋತ್ಸವ ಸ್ಪರ್ಧೆಯಲ್ಲಿ ಶರಣಬಸವೇಶ್ವರ ಕಲಾ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
Update: 2025-10-29 16:36 IST
ಕಲಬುರಗಿ : ಜಿಲ್ಲಾ ಯುವಜನೋತ್ಸವದ ವಿವಿಧ ಸ್ಫರ್ಧೆಗಳಲ್ಲಿ ನಗರದ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯಕ್ಕೆ ಹಲವಾರು ಪ್ರಶಸ್ತಿಗಳು ಲಭಿಸಿವೆ.
ಸರಕಾರಿ ಮಹಾ ವಿದ್ಯಾಲಯದಲ್ಲಿ ನಡೆದ ಜಾನಪದ ಗೀತೆ ಸ್ಪರ್ಧೆಯಲ್ಲಿ ಭುವನಕುಮಾರ ಹಿರೇಮಠ ಮತ್ತು ತಂಡ ಪ್ರಥಮ ಸ್ಥಾನ, ಘೋಷಣೆ ಸ್ಫರ್ಧೆಯಲ್ಲಿ ಫೈಜಾ ಖಾನಮ್ ದ್ವೀತಿಯ ಸ್ಥಾನ, ಜಾನಪದ ನೃತ್ಯ ಸ್ಫರ್ಧೆಯಲ್ಲಿ ಗಾಯತ್ರಿ ಮತ್ತು ತಂಡ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ದಾಕ್ಷಾಯಿಣಿ ಎಸ್.ಅಪ್ಪ, ಶರಣಬಸವೇಶ್ವರ ಸಂಸ್ಥೆಯ 9ನೇ ಪೀಠಾಧಿಪತಿ ಚಿ.ದೊಡ್ಡಪ್ಪ ಅಪ್ಪ ಮತ್ತು ಕಾರ್ಯದರ್ಶಿ ಬಸವರಾಜ ದೇಶಮುಖ ಶ್ಲಾಘಿಸಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಸುರೇಶಕುಮಾರ ನಂದಗಾಂವ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.