×
Ad

ಕಲಬುರಗಿ | ಪಟೇಲ್ ಮಂಚ್ ವತಿಯಿಂದ ಎಸ್ಐಆರ್ ಕುರಿತು ವಿಚಾರ ಸಂಕಿರಣ

Update: 2026-06-14 18:46 IST

ಕಲಬುರಗಿ: ನಗರದ ವಿದ್ಯುತ್ ಸರಬರಾಜು ಸಭಾಂಗಣದಲ್ಲಿ ಮುಸ್ಲಿಂ ಪಟೇಲ್ ಮಂಚ್ ವತಿಯಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕುರಿತು ಶನಿವಾರ ವಿಚಾರ ಸಂಕಿರಣ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಅಫಜಲಪುರದ ಕಾಂಗ್ರೆಸ್ ಮುಖಂಡರಾದ ಮತೀನ್ ಪಟೇಲ್ ಹಾಗೂ ಮೆರಾಜ್ ಪಟೇಲ್ ತಾವರಗೇರಾ ಅವರ ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಟೇಲ್ ಮಂಚ್‌ನ ಮುಖಂಡರು, ಸದಸ್ಯರು ಹಾಗೂ ಸಮಾಜದ ವಿವಿಧ ಗಣ್ಯರು ಭಾಗವಹಿಸಿ ಮತದಾರರ ಹಕ್ಕುಗಳ ಸಂರಕ್ಷಣೆ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಎಸ್ಐಆರ್ ಪ್ರಕ್ರಿಯೆಯ ಮಹತ್ವ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಸಂರಕ್ಷಣೆ ಕುರಿತಂತೆ ಸವಿಸ್ತಾರ ಮಾಹಿತಿ ನೀಡಲಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.  

ಮತೀನ್ ಪಟೇಲ್ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಮೆರಾಜ್ ಪಟೇಲ್ ತಾವರಗೇರಾ ಅವರು ಎಸ್ಐಆರ್ ಪ್ರಕ್ರಿಯೆಯ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಮಾಜದ ಸಂಘಟನೆಗಳು ಮುಂದಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಂಕಿರಣದಲ್ಲಿ ಭಾಗವಹಿಸಿದ್ದ ಸದಸ್ಯರು ಮತದಾರರ ಹಕ್ಕುಗಳ ರಕ್ಷಣೆ, ಜನಜಾಗೃತಿ ಕಾರ್ಯಕ್ರಮಗಳ ಅಗತ್ಯತೆ ಹಾಗೂ ಮತದಾರರ ಪಟ್ಟಿಯ ಸಮರ್ಪಕ ನಿರ್ವಹಣೆ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಮತದಾರರ ಹಕ್ಕುಗಳ ಸಂರಕ್ಷಣೆಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನೂ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಅಭಿಷೇಕ್ ಅಲ್ಲಂ ಪ್ರಭು ಪಾಟೀಲ್ ಮುನ್ನಡೆಸಿದರು. ಅಬ್ದುಲ್ ರಹೀಂ ಪಟೇಲ್ ವಿಷಯದ ಕುರಿತು ವಿವರವಾದ ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಲಾಲ್ ಅಹ್ಮದ್ ಬಾಂಬೆ ಸೇಠ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮತೀನ್ ಪಟೇಲ್, ಪಪ್ಪು ಪಟೇಲ್, ಬಾಷಾ ಪಟೇಲ್, ರಹಮಾನ್ ಪಟೇಲ್, ತಾಜುದ್ದೀನ್ ಪಟೇಲ್, ರುಕುಮ್ ಪಟೇಲ್, ಯೂಸುಫ್ ಪಟೇಲ್ , ಮೋದೀನ್ ಪಟೇಲ್ ಅನಬಿ, ರಾಜಾ ಪಟೇಲ್, ಇಲಿಯಾಸ್ ಪಟೇಲ್, ಬಾಬಾ ಪಟೇಲ್ ಸೇರಿದಂತೆ ಸಮಾಜದ ಹಲವು ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News