×
Ad

ಕಲಬುರಗಿ | ಉಪ ಕಾರ್ಯದರ್ಶಿ ಸುತ್ತೋಲೆ ಹಿಂಪಡೆಯಲು ತಳವಾರ ಮಹಾಸಭಾ ಆಗ್ರಹ

Update: 2025-03-09 20:18 IST

ಕಲಬುರಗಿ : ರಾಜ್ಯದಲ್ಲಿ ನಾಯ್ಕಡ್, ನಾಯಕ್ ಸಮುದಾಯದ ಪರ್ಯಾಯ ಪದ ಜಾತಿಗಳಲ್ಲದ ತಳವಾರ ಮತ್ತು ಪರಿವಾರಜಾತಿಯವರು ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವುದರಿಂದ ನೈಜ ಪರಿಶಿಷ್ಟ ಪಂಗಡದ ಸಮುದಾಯದವರು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಅವರು ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಕರ್ನಾಟಕ ತಳವಾರ ಮಹಾಸಭಾ ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಕಾಂತ ತಳವಾರ ನೇತೃತ್ವದ ನಿಯೋಗ ನಗರಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರು ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ತಳವಾರ ಸಮುದಾಯಕ್ಕೆ ಆಗುತ್ತಿರುವ ಈ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಪೃಥ್ವಿರಾಜ, ಭೀಮಾಶಂಕರ ಅಂಕಲಗಿ, ಗುರು ಹಾವನೂರ, ರವಿ, ಈರಣ್ಣ ಕಾಳಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News