×
Ad

ಕಲಬುರಗಿ| ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Update: 2025-08-20 19:27 IST

ಹಣಮಂತ ಬಸವರಾಜ ಮೊಸಂಡಿ

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಫರಹತಾಬಾದ್ ವ್ಯಾಪ್ತಿಯ ಕವಲಗಾ(ಬಿ) ಗ್ರಾಮದಲ್ಲಿ ನಡೆದಿದೆ.

ಕವಲಗಾ(ಬಿ) ನಿವಾಸಿ ಹಣಮಂತ ಬಸವರಾಜ ಮೊಸಂಡಿ(35) ಆತ್ಮಹತ್ಯೆ ಮಾಡಿಕೊಂಡಿರುವ ರೈತ ಎಂದು ತಿಳಿದುಬಂದಿದೆ.

3 ಎಕರೆ ಜಮೀನು ಹೊಂದಿರುವ ರೈತ ಹಣಮಂತ, ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ 2 ಲಕ್ಷ ರೂ. ಸಾಲ ಹಾಗೂ ಕೃಷಿಗಾಗಿ ಖಾಸಗಿ ಸಾಲ ಮಾಡಿಕೊಂಡಿದ್ದರು. ಧಾರಾಕಾರ ಸುರಿದ ಮಳೆಯಿಂದಾಗಿಬೆಳೆದಿದ್ದ ಹತ್ತಿ, ತೊಗರಿ ಬೆಳೆ ನಾಶವಾಗಿದೆ ಎನ್ನಲಾಗಿದೆ.

ಇದರಿಂದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News