×
Ad

ಕಲಬುರಗಿ | ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

Update: 2025-02-21 09:56 IST

ಕಲಬುರಗಿ: ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದುಕೊಂಡು ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಳಿಗೇರಾ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಹುಳಿಗೇರಾ ಗ್ರಾಮದ ನಿವಾಸಿ ಪ್ರಕಾಶ ರವೀಂದ್ರ ಜಮದಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಪ್ರಕಾಶ ಗುರುವಾರ ರಾತ್ರಿ 9 ಗಂಟೆಯಾದರೂ ಮನೆಗೆ ಬಂದಿಲ್ಲ ಎಂದು ಹುಡುಕುತ್ತಿದ್ದಾಗ ಹಿಪ್ಪರಗಿ ಗ್ರಾಮದ ಮಾರ್ಗದಲ್ಲಿರುವ ತನ್ನ ಕೃಷಿ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪ್ರಕಾಶ ರಟಕಲ್ ಬ್ಯಾಂಕಿನಿಂದ ಕೃಷಿ ಚಟುವಟಿಕೆಗಾಗಿ 80 ಸಾವಿರ ರೂ. ಮತ್ತು ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇನ್ನೂ ಕೈಕೊಟ್ಟ ಬೆಳೆ, ಸಾಲ ತೀರಿಸಲು ಆಗದೇ ತನ್ನದೇ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಆರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News