ಕಲಬುರಗಿ | ದಸರಾ ಕವಿಗೋಷ್ಠಿಗೆ ಲೇಖಕ ವಡ್ಡನಕೇರಿ ಆಯ್ಕೆ
Update: 2025-09-22 21:40 IST
ಕಲಬುರಗಿ: ಮೈಸೂರು ದಸರಾ ಕವಿಗೋಷ್ಠಿಗೆ ಕಲಬುರಗಿ ಜಿಲ್ಲೆಯ ಪ್ರಾಧ್ಯಾಪಕ ಹಾಗೂ ಲೇಖಕ ಡಾ.ಶರಣಬಸಪ್ಪ ವಡ್ಡನಕೇರಿ ಅವರು ಆಯ್ಕೆಯಾಗಿದ್ದಾರೆ.
ಇದೇ ತಿಂಗಳು 24 ರಂದು ರಂದು ಮೈಸೂರಿನಲ್ಲಿ ನಡೆಯುವ ದಸರಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲಿದ್ದಾರೆ.
ಡಾ.ಶರಣಬಸಪ್ಪ ವಡ್ಡನಕೇರಿ ಅವರು ಇದುವರೆಗೆ 100ಕ್ಕಿಂತ ಸೃಜನ ಹಾಗೂ ಸೃಜನೇತರ ಕೃತಿಗಳನ್ನು ಬರೆದು ಪ್ರಕಟಿಸಿರುವ ಅವರು ಕಲಬುರಗಿಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.