ಕಲಬುರಗಿ | ಬಿಜೆಪಿ ಕಚೇರಿಯಲ್ಲಿ ನಾರಾಯಣ ಗುರು 172ನೇ ಜಯಂತಿ
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಅವರ 172ನೇ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಪಕ್ಷದ ಸ್ಥಳೀಯ ಅಧ್ಯಕ್ಷ ವೀರಣ್ಣ ಯಾರಿ, ಶ್ರೀ ನಾರಾಯಣ ಗುರುಗಳನ್ನು ಪೂಜಿಸಿದರೆ ಸಾಲದು ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆದಾಗ ಮಾತ್ರ ಅವರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.
ನಾರಾಯಣ ಗುರುಗಳು ಸಮಾಜದಲ್ಲಿದ್ದ ಜಾತಿ ತಾರತಮ್ಯ ಎಂಬ ಅನಿಷ್ಟ ಪದ್ಧತಿ ವಿರುದ್ಧ ಜನರನ್ನು ಜಾಗೃತಗೊಳಿಸಿದರು. ಅವರ ಜೀವನದುದ್ದಕ್ಕೂ ಶೋಷಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅವರು ಅನೇಕ ಸಾಮಾಜಿಕ ಸುಧಾರಣೆಗಳನ್ನು ತಂದಿದ್ದಾರೆ. ಆದ್ದರಿಂದ ನಾವೆಲ್ಲರೂ ಗುರುಗಳ ತತ್ವ, ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈಡಿಗ ಸಮಾಜದ ಯುವ ಮುಖಂಡ ಸಂತೋಷ ಗುತ್ತೆದಾರ ಮಾತನಾಡಿ, ಬುದ್ಧ, ಬಸವಣ್ಣರಂತೆ ಸಮಾನತೆಗಾಗಿ ಶಾಂತಿ ಮತ್ತು ಮಾನವತಾ ಸಂದೇಶಗಳನ್ನು ಸಾರಿದ್ದಾರೆ. ಶೋಷಿತ ಸಮುದಾಯದ ಜನರನ್ನು ಜಾಗೃತಗೊಳಿಸಿದ ನಾರಾಯಣ ಗುರುಗಳು ಪ್ರತ್ಯೇಕ ದೇಗುಲಗಳನ್ನು ಸ್ಥಾಪಿಸಿದರು. ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದರು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಯುವ ಮುಖಂಡ ವಿಠಲ ನಾಯಕ, ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್.ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಗಿರಿಮಲ್ಲಪ್ಪ ಕಟ್ಟಿಮನಿ, ಅರ್ಜುನ ಕಾಳೆಕರ, ಹರಿ ಗಲಾಂಡೆ, ಅಂಬದಾಸ ಜಾಧವ, ಯಂಕಮ್ಮ ಗೌಡಗಾಂವ, ಈಡಿಗ ಸಮಾಜದ ಮುಖಂಡರಾದ ಸೂರ್ಯಕಾಂತ ಗಢಕರ, ಮಲ್ಲಿಕಾರ್ಜುನ ಸಾತಖೇಡ, ಸಂತೋಷ ಗುತ್ತೆದಾರ, ದೀಪಕ ಸಾತಖೇಡ, ಬಾಬು ಗುತ್ತೆದಾರ, ಸುರೇಶ ಗುತ್ತೆದಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.