×
Ad

ಪ್ರತ್ಯೇಕ ಪ್ರಕರಣ | ಕಲಬುರಗಿಯಲ್ಲಿ ಸಿಡಿಲು ಬಡಿದು ಇಬ್ಬರು ಮೃತ್ಯು

Update: 2025-05-16 18:28 IST

ಸಾಂದರ್ಭಿಕ ಚಿತ್ರ

ಕಲಬುರಗಿ : ಸಿಡಿಲು ಬಡಿದು ಜೇವರ್ಗಿ ತಾಲ್ಲೂಕು ಹಾಗೂ ನೆರೆಯ ಯಡ್ರಾಮಿ ತಾಲ್ಲೂಕಿನ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಜೇವರ್ಗಿ ತಾಲ್ಲೂಕಿನ ರೇವನೂರ್ ಗ್ರಾಮದ ಶ್ರೀನಾಥ್ ಹಾಗೂ ಯಡ್ರಾಮಿ ತಾಲ್ಲೂಕಿನ ಪಡಗದಳ್ಳಿಯ ಸಿದ್ದಪ್ಪ ಪೂಜಾರಿ (33) ಎಂದು ಗುರುತಿಸಲಾಗಿದೆ.

ಶ್ರೀನಾಥ್‌, ಗುರುವಾರ ಗ್ರಾಮದ ತನ್ನ ಹೊಲಕ್ಕೆ ಹೋಗಿ ಮರಳಿ ಮನೆಗೆ ಬರುವಾಗ ಸಿಡಿಲು ಬಡಿದು ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಸಿದ್ದಪ್ಪ ಪೂಜಾರಿ ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News