ಶಹಾಬಾದ್ | ಹಡಪದ ಅಪ್ಪಣ್ಣ ಜಯಂತಿಯ ಪೂರ್ವಭಾವಿ ಸಭೆ
Update: 2025-07-08 19:55 IST
ಕಲಬುರಗಿ: ಶರಣ ಹಡಪದ ಅಪ್ಪಣ್ಣನವರ 891ನೇ ಜಯಂತ್ಯುತ್ಸವವನ್ನು ಶಹಾಬಾದ್ ತಾಲ್ಲೂಕಾದ್ಯಂತ ಜು.10 ರಂದು ಬೆಳಗ್ಗೆ 11 ಗಂಟೆಗೆ ಅರ್ಥ ಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಶಹಾಬಾದ್ ತಾಲ್ಲೂಕು ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಗ್ರೇಡ್ 2 ತಹಶೀಲ್ದಾರ್ ಗುರುರಾಜ ಸಂಗಾವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಶಾಲಾ-ಕಾಲೇಜು, ವಿವಿಧ ಕಚೇರಿಗಳಲ್ಲಿ ಅಪ್ಪಣ್ಣ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಅಣವೀರಪ್ಪ, ಬಸವರಾಜ ಹಳ್ಳಿ ಹಡಪದ, ದೂಳಪ್ಪ ಹಡಪದ, ಸಿದ್ರಾಮ ಹಡಪದ ಯಾಗಾಪೂರ, ನಾಗಣ್ಣ ಮುತ್ತುಕೋಡ, ಶಿವಲಿಂಗ ಹಡಪದ, ಭಾಗಣ್ಣ ದಂಡಗುಂಡ, ಶಿವಕುಮಾರ, ನೀಲಕಂಠ ಹಡಪದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.