×
Ad

ಬಂಟ್ವಾಳ: ದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನ; ಪತಿ ಮೃತ್ಯು, ಪತ್ನಿಯ ಸ್ಥಿತಿ ಗಂಭೀರ

Update: 2023-07-01 22:18 IST

ಪ್ರತಾಪ್

ವಿಟ್ಲ: ಅನಂತಾಡಿಯ ಬಾಕಿಲ ಎಂಬಲ್ಲಿ ಪತಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಂತಾಡಿ ಬಾಕಿಲ ನಿವಾಸಿ ಪ್ರತಾಪ್ (35) ಮೃತಪಟ್ಟಿದ್ದು, ವೀಣಾ (32) ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ರಾತ್ರಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಮಾಹಿತಿ ತಿಳಿದು ಇಬ್ಬರನ್ನೂ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಾಪ್ ಮೃತಪಟ್ಟಿರುವುದನ್ನು ವೈದ್ಯರು ದೃಢೀರಿಸಿದ್ದು, ಪತ್ನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಿದ್ದಾರೆ.

ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News