×
Ad

ಮುದ್ರಣಾಲಯಗಳ ಹಿರಿಯ ಕಾರ್ಮಿಕರಿಗೆ ಸನ್ಮಾನ -ಪ್ರತಿಭಾ ಪುರಸ್ಕಾರ

Update: 2023-07-09 19:45 IST

ಉಡುಪಿ, ಜು.9: ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ವತಿಯಿಂದ ಮುದ್ರಣಾಲಯಗಳ ಹಿರಿಯ ಕಾರ್ಮಿಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಮಲ್ಪೆ ಬಿಲ್ಲವ ಸಮಾಜ ಸಂಘ ಅಧ್ಯಕ್ಷ ಗೋಪಾಲ ಬಂಗೇರ, ನಿವೃತ್ತ ಶಿಕ್ಷಕ ಮಂಜುನಾಥ ಶೆಟ್ಟಿ ಕಾರ್ಕಳ, ಮುದ್ರಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಬಿ.ಜಿ.ಸುಬ್ಬರಾವ್ ಮುಖ್ಯ ಅತಿಥಿಗಳಾಗಿದ್ದರು.

ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿಯ ಸಂಚಾಲಕ ಮಹೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಸಹಸಂಚಾಲಕ ಅಶೋಕ್ ಶೆಟ್ಟಿ ಸ್ವಾಗತಿಸಿದರು. ಸಂಘದ ಉಡುಪಿ ವಲಯಾಧ್ಯಕ್ಷ ಪ್ರಶಾಂತ್ ನಾಯ್ಕ್, ಬ್ರಹ್ಮಾವರ ವಲಯಾಧ್ಯಕ್ಷ ಜೊಸೆಫ್ ಬಾಂಜ್, ಕಾಪು ವಲಯಾಧ್ಯಕ್ಷ ಸುಧೀರ್ ಬಂಗೇರ, ಕುಂದಾಪುರ ವಲಯಾಧ್ಯಕ್ಷ ವಾಸುದೇವ ವರ್ಣ ಮತ್ತು ಕಾರ್ಕಳ ವಲಯಾಧ್ಯಕ್ಷ ಪ್ರವೀಣ್ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಂ.ಶರೀಫ್ ಕಾರ್ಯಕ್ರಮ ನಿರೂಪಿಸಿ ದರು. ಕೋಶಾಧಿಕಾರಿ ರವಿ ಬೇಳಂಜೆ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News