×
Ad

ಕುಮಟ-ಶಿರಸಿ ರಸ್ತೆ ಕಾಮಗಾರಿ; ಮುಂಜಾಗೃತಾ ಕ್ರಮ ಜರುಗಿಸಲು ಅಗ್ರಹ: ರವೀಂದ್ರ ನಾಯ್ಕ

Update: 2023-07-01 21:52 IST

ಶಿರಸಿ: ಕುಮಟ ಮತ್ತು ಶಿರಸಿ ಸಂಪರ್ಕ ರಸ್ತೆ ಕಾಮಗಾರಿ ಚಾಲ್ತಿಯಲ್ಲಿದ್ದು, ಪ್ರಸಕ್ತ ವರ್ಷದ ಮಳೆಯಿಂದ ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದ ವಾಹನ ಸಂಚಾರಕ್ಕೆ ಆತಂಕ ಹಾಗೂ ಅಪಘಾತವಾಗದ ರೀತಿಯಲ್ಲಿ ಮುಂಜಾಗೃತ ಕ್ರಮ ಜರುಗಿಸಬೇಕೆಂದು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಜಿಲ್ಲಾಡಳಿತಕ್ಕೆ ಅಗ್ರಹಿಸಿದ್ದಾರೆ.

ದಿನನಿತ್ಯ ಸಾವಿರಾರು ವಾಹನಗಳು, ಪೂರ್ಣಗೊಳ್ಳದ ಕಾಮಗಾರಿ ರಸ್ತೆಯಿಂದ ಸಂಚರಿಸುವ ಸಂದರ್ಭದಲ್ಲಿ ಅಪಾಯ ಸಂಭವಿಸುವ ಪೂರ್ವದಲ್ಲಿಯೇ ಜಿಲ್ಲಾಡಳಿತ ಜಾಗೃತೆವಹಿಸುವುದು ಅತೀ ಅವಶ್ಯವೆಂದು ಅವರು ಹೇಳಿದರು.

ಮಳೆಯಿಂದ ಪೂರ್ಣಗೊಳ್ಳದ ರಸ್ತೆ ಸಂಚಾರಕ್ಕೆ ಅನುಕೂಲವಾಗುವಂತೆ ಅಲ್ಲಲ್ಲಿ ನೀರು ತುಂಬಿದ ಹೊಂಡ-ತಗ್ಗು ಪ್ರದೆಶದ ರಸ್ತೆಯನ್ನು ಸಮತಟ್ಟು ಮಾಡುವ ತುರ್ತು ಕಾಮಗಾರಿ ಜರುಗುತಿದ್ದಾಗಿಯೂ, ತೀವ್ರ ಮಳೆಯಿಂದ ಕುಸಿಯುವ ಧರೆ ಹಾಗೂ ಏಕರಸ್ತೆಯಲ್ಲಿ ದ್ವಿಮುಖದಲ್ಲಿ ವಾಹನಗಳು ಸಂಚರಿಸುತ್ತಿರುವುದರಿಂದ ಅಪಾಯ ಸಂಭವಿಸುವ ಭೀತಿ ಉಂಟಾಗುತ್ತಿದೆ. ಕಾಮಗಾರಿಯ ಅಕ್ಕಪಕ್ಕದಲ್ಲಿ ಹೆಚ್ಚಿನ ಸುಕ್ಷರತೆಗೆ ಗಮನವಹಿಸುವುದು ಅತೀ ಅವಶ್ಯವೆಂದು ಅವರು ಜಿಲ್ಲಾಡಳಿತಕ್ಕೆ ಕೋರಿದ್ದಾರೆ.

ಶಿರಸಿ-ಕುಮಟ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದರೂ, ಅಂದಾಜು 30 ಕೀ.ಮೀ ನಷ್ಟು ರಸ್ತೆ ಕಾಮಗಾರಿ ಪೂರ್ಣಗೊಂಡು, ಇನ್ನೂ ಅರ್ಧದಷ್ಟು ರಸ್ತೆ ಕಾಮಗಾರಿ ಆದಷ್ಟು ಬೇಗ ಮುಗಿದು ಸಾರ್ವಜನಿಕ ಅನುಕೂಲಕ್ಕೆ ಅವಕಾಶ ಮಾಡಿಕೊಡಬೇಕೆಂದು ರವೀಂದ್ರ ನಾಯ್ಕ ಅಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News