×
Ad

ತೋಡಿನ ನೀರಿಗೆ ಬಿದ್ದು ವಲಸೆ ಕಾರ್ಮಿಕ ಮೃತ್ಯು

Update: 2023-07-03 20:53 IST

ಉಡುಪಿ, ಜು.೩: ಬಾಗಲಕೋಟೆ ಮೂಲಕ ವಲಸೆ ಕಾರ್ಮಿಕರೊಬ್ಬರು ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ೭೬-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ನಾಗಬನದ ಬಳಿ ಜು.3ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೋಮಪ್ಪ ರಾಥೋಡ್(38) ಎಂದು ಗುರುತಿಸಲಾಗಿದೆ. ಪೀಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಇವರು, ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿ ದ್ದರು. ಮುಂಜಾನೆ ಮನೆಯಿಂದ ಎದ್ದು ಹೋದ ಇವರು, ಕಾಲು ಜಾರಿ ಹರಿಯುತ್ತಿರುವ ತೋಡಿನ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News