×
Ad

ಐಎಂಎಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ

Update: 2023-07-04 19:24 IST

ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿಯ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಶನಿವಾರ ಉಡುಪಿ ನಾಯರ್‌ಕೆರೆಯ ಐ.ಎಂ.ಎ. ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆಯ ಪ್ರೊ ವೈಸ್ ಚಾನ್ಸಲರ್ ಡಾ.ಶರತ್ ಕೆ.ರಾವ್, ಮಣಿಪಾಲ ಕೆಎಂಸಿಯ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಜಿಲ್ಲಾ ಸರ್ಜನ್ ಡಾ.ಸುದೇಶ್ ಕುಮಾರ್ ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ಐ.ಎಂ.ಎ. ಉಡುಪಿ-ಕರಾವಳಿ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ವಹಿಸಿದ್ದರು. ವೈದ್ಯರ ದಿನಾಚರಣೆಯ ಪ್ರಯುಕ್ತ ಹಿರಿಯ ವೈದ್ಯರಾದ ಡಾ. ಅಚ್ಯುತರಾಯ ಆಚಾರ್, ಡಾ.ಶುಭ ಗೀತಾ, ಡಾ.ರಾಮಚಂದ್ರ ಐತಾಳ್ ಅವರಿಗೆ ಡಾ.ಬಿ.ಸಿ.ರಾಯ್ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಐಎಂಎ ಉಡುಪಿ-ಕರಾವಳಿ ಗೌರವ ಕಾರ್ಯದರ್ಶಿ ಡಾ.ಕೇಶವ್ ನಾಯಕ್ ಸ್ವಾಗತಿಸಿದರು. ಡಾ.ರಾಜಲಕ್ಷ್ಮೀ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News