×
Ad

ರಸ್ತೆ ಅಪಘಾತ: ವೈದ್ಯ ವಿದ್ಯಾರ್ಥಿಗೆ ಗಾಯ

Update: 2023-07-09 21:27 IST

ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ರವಿವಾರ ನಡೆದಿದೆ.

ಮೈಸೂರು ಮೂಲದ ಡಾ. ವಿವೇಕ್ ಶಶಿಕುಮಾರ್ ಗಾಯಗೊಂಡವರು.

ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ನಸುಕಿನ 3.30 ರ ಸುಮಾರಿಗೆ ಜಾನುವಾರುಗಳಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಕಾರು  ಪಲ್ಟಿ ಹೊಡೆದಿದೆ. ಪರಿಣಾಮ ರಸ್ತೆ ಬದಿಯಲ್ಲಿ ಮಲಗಿದ್ದ ಮೂರು ಜಾನುವಾರುಗಳು ಸಾವನ್ನಪ್ಪಿವೆ, ಕಾರಲ್ಲಿದ್ದ ವೈದ್ಯ ವಿದ್ಯಾರ್ಥಿ ಕೈ ಮೂಳೆ ಮುರಿತಕ್ಕೊಳಗಾಗಿದೆ. 

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News