×
Ad

ಉಪ್ಪಳ: ಕಾರು ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2024-01-07 18:31 IST

ಸಾಂದರ್ಭಿಕ ಚಿತ್ರ

ಮಂಜೇಶ್ವರ: ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ.

ಉಪ್ಪಳ ಪತ್ವಾಡಿ ಮೊಗರ್ ನಿವಾಸಿ ಮುಹಮ್ಮದ್ ಮೃತಪಟ್ಟವರು.

ಬಾಯಾರು ಕಡೆಯಿಂದ ಉಪ್ಪಳಕ್ಕೆ ಬರುತ್ತಿದ್ದ ಕಾರು ಮತ್ತು ಎದುರಿನಿಂದ ಬಂದ ಸ್ಕೂಟರ್ ನಡುವೆ ಅಪಘಾತ ನಡೆದಿದೆ . ಗಂಭೀರ ಗಾಯಗೊಂಡ ಮುಹಮ್ಮದ್ ರನ್ನು ಸ್ಥಳೀಯರು ಉಪ್ಪಳದ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಸಂಬಂಧ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News