ಚೆರ್ವತ್ತೂರು | ರಾ. ಹೆದ್ದಾರಿ ಕಾಮಗಾರಿ ವೇಳೆ ಗುಡ್ಡ ಕುಸಿತ: ಮಣ್ಣಿನಡಿಗೆ ಸಿಲುಕಿ ಓರ್ವ ಮೃತ್ಯು
Update: 2025-05-12 11:57 IST
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣಿನಡಿಗೆ ಸಿಲುಕಿ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಚೆರ್ವತ್ತೂರು ಎಂಬಲ್ಲಿ ನಡೆದಿದೆ. ಮೂವರನ್ನು ರಕ್ಷಿಸಲಾಗಿದೆ.
ಚೆರ್ವತ್ತೂರ್ ಮಟ್ಟಲಾಯಿ ಎಂಬಲ್ಲಿ ಈ ಘಟನೆ ನಡೆದಿದೆ.
ಘಟನೆಯಲ್ಲಿ ಮಣ್ಣಿನಡಿಯಲ್ಲಿ ನಾಲ್ವರು ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹರಸಾಹಸ ಪಟ್ಟು ನಾಲ್ವರನ್ನು ಹೊರತೆಗೆದಿದ್ದಾರೆ. ಈ ಪೈಕಿ ಓರ್ವ ಮೃತಪಟ್ಟಿದ್ದಾರೆ. ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ರಸ್ತೆ ಬದಿಯ ಗುಡ್ಡವು ಭಾರೀ ಕುಸಿದು ಬಿದ್ದಿದೆ. ಇದರಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದರು. ಗಾಯಗೊಂಡ ಕಾರ್ಮಿಕರನ್ನು ಚೆರ್ವತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.