Kasaragod | ಗಡಿನಾಡಿನ ಕನ್ನಡಿಗರ ಸಮಸ್ಯೆಗೆ ಕರ್ನಾಟಕ-ಕೇರಳ ಸರಕಾರ ಸ್ಪಂದಿಸಲಿ: ಸೋಮಣ್ಣ ಬೇವಿನಮರದ
ವಾರ್ತಾಭಾರತಿಯ ಸಂಶುದ್ದೀನ್ ಎಣ್ಮೂರು ಸಹಿತ 16 ಪತ್ರಕರ್ತರಿಗೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ
ಕಾಸರಗೋಡು: ಗಡಿನಾಡಿನ ಕನ್ನಡಿಗರ ಸಮಸ್ಯೆ ಬಗ್ಗೆ ಕರ್ನಾಟಕ ಹಾಗೂ ಕೇರಳ ಸರಕಾರದ ಸ್ಪಂದನ ಅಗತ್ಯ. ಈ ನಿಟ್ಟಿನಲ್ಲಿ ಕೆಲಸಗಳು ನಡೆಯಬೇಕು ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಭಿಪ್ರಾಯಪಟ್ಟರು.
ಅವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಕುಡಾಲು ಮೇರ್ಕಳ ಸುಬ್ಬಯ್ಯಕಟ್ಟೆ ಅನುದಾನಿತ ಕ್ರಿಯಾ ಪ್ರಾಥಮಿಕ ಶಾಲಾ ವಠಾರದಲ್ಲಿ ಶನಿವಾರ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಜಿಪಂ ಸದಸ್ಯ ಸೋಮಶೇಖರ ಜೆ.ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಕನಿಷ್ಠ ವೇತನ ಆಯೋಗದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲಾ ತಂಙಳ್, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಪೈವಳಿಕೆ ಗ್ರಾಪಂ ಉಪಾಧ್ಯಕ್ಷ ರಾಘವೇಂದ್ರ ಭಟ್, ಸ್ಥಾಯಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮಾಸ್ತರ್ ಕೆ.ಎಚ್., ಸದಸ್ಯೆ ಶಶಿಕಲಾ ರೈ, ಕಸಾಪ ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಅರಿಬೈಲು ಗೋಪಾಲ ಶೆಟ್ಟಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಶ್ರೀನಿವಾಸ ನಾಯಕ್ ಇಂದಾಜೆ, ರಾಧಾ ಕೃಷ್ಣ ಕೆ.ಉಳಿಯತ್ತಡ್ಕ, ಶಿವಾನಂದ ಕೋಟ್ಯಾನ್, ಶಿವ ರೆಡ್ಡಿ ಖ್ಯಾಡೆದ್, ಎನ್.ಚನಿಯಪ್ಪನಾಯ್ಕ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ ಉಪಸ್ಥಿತರಿದ್ದರು.
ಇದೇ ವೇಳೆ ಸಾಧಕರಾದ ಸಂದೀಪ್ ಪುರಂದರ ಶೆಟ್ಟಿ, ಬಿ.ಎ.ಖಾದರ್ ಹಾಜಿ, ಡಾ.ಶಶಿಧರ ಎಚ್. ದೊಡ್ಡಮನಿ, ಝಹೀಂ ಕುಬಣೂರು, ಪಿ.ಮುಹಮ್ಮದ್ ಝಯಾನ್ ಇಸ್ಮಾಯೀಲ್ರನ್ನು ದೀಪಕ್ ವಿ.ಕೆ. ಸನ್ಮಾನಿಸಿದರು.
ಮಾಧ್ಯಮ ಕ್ಷೇತ್ರದ ಸಾಧಕರಾದ ಬಿ.ಎಂ.ಹನೀಫ್, ವಾರ್ತಾಭಾರತಿಯ ಉಪ ಸಂಪಾದಕ ಸಂಶುದ್ದೀನ್ ಎಣ್ಮೂರು, ಕುರಿಯ ವಾಸುದೇವ ಎಂ. ಹೊಳ್ಳ, ಡಾ.ಯುಎಂ.ರವಿ, ಪುಂಡಲೀಕ ಭೀಮಪ್ಪಬಾಲೋಜಿ, ಎಚ್.ಇ.ರವಿ ಸೋಮವಾರಪೇಟೆ, ವಿಶ್ವನಾಥ್ ಬೆಳಗಲ್ ಮಠ ಕೊಪ್ಪಳ, ಪ್ರಕಾಶ್ ಸುವರ್ಣ ಕಟಪಾಡಿ, ದೇವೇಂದ್ರಪ್ಪಆವಂಟಿ ಕಲಬುರಗಿ, ಸತೀಶ್ ಇರಾ, ಸುಭಾಷ್ ಶಿರಿಯ, ಹರೀಶ್ ಮಾಂಬಾಡಿ, ಎ.ಆರ್.ಚಿದಂಬರ ಕೊರಟಗೆರೆ ತುಮಕೂರು, ಕೆ.ಆರ್.ಮಂಜುನಾಥ ಹಾಸನ, ತೆಕ್ಕೇಕರೆ ಶಂಕರನಾರಾಯಣ ಭಟ್, ಸುಬ್ಬಣ್ಣ ಶೆಟ್ಟಿ ಕುಚ್ಚಿಕ್ಕಾಡ್ ಇವರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸೀತಾರಾಮ ಶೆಟ್ಟಿ ಭಂಡಾರಗುಟ್ಟು, ಪೈವಳಿಕೆ ಗ್ರಾಪಂ ಅಧ್ಯಕ್ಷೆ ಬದ್ರುನ್ನಿಸ ಸಲೀಂ, ಶಿವರಾಮ ಕಾಸರಗೋಡು ಮತ್ತಿತರರು ಉಪಸ್ಥಿತರಿದ್ದರು.
ಅಶೋಕ್ ಭಂಡಾರಿ ಸ್ವಾಗತಿಸಿದರು. ಗಂಗಾಧರ ತೆಕ್ಕೆಮೂಲೆ ವಂದಿಸಿದರು. ಸೌಮ್ಯ ಗೌಡ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಕಾರ್ಯಕ್ರಮ ನಿರೂಪಿಸಿದರು.